ಅದ್ದೂರಿ ಹರ ಜಾತ್ರೆಗೆ ಕ್ಷಣಗಣನೆ.! ಮದುವಣಗಿತ್ತಿಯಂತೆ ಸಿಂಗಾರಗೊಂಡ ಶ್ರೀ ಮಠ.


ಹರಿಹರ: ಹರಿಹರ ನಗರದ ಹೊರವಲಯದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ನಾಳೆ ನಡೆಯಲಿರುವ ಹರಾ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.
ಜಾತ್ರೆಯನ್ನ ಯಶಸ್ವಿಗೊಳಿಸಲು ಎಲ್ಲಾ ರೀತಿಯ ಸಿದ್ಧತೆಗಳು ಬರದಿಂದ ಸಾಗುತ್ತಿದೆ. ಪಂಚಮಸಾಲಿ ಗುರುಪೀಠದ ಪೀಠಾಧಿಪತಿ ಶ್ರೀ ವಚನಾನಂದ ಸ್ವಾಮೀಜಿಗಳು ಜಾತ್ರಾ ಸಿದ್ಧತೆಯನ್ನ ತಾವೇ ಖುದ್ದಾಗಿ ಪರಿಶೀಲಿಸಿದರು. ಅಡುಗೆ ಮಾಡುವ ಬಾಣಸಿಗರನ್ನು ಮಾತನಾಡಿಸಿದಾ ಶ್ರೀಗಳು , ಕೆಲ ಹೊತ್ತು ತಾವು ಅಡುಗೆ ಕಾರ್ಯದಲ್ಲಿ ಕೈಜೋಡಿಸಿದರು.

ಮಠದ ಆವರಣದಲ್ಲಿ ಪೆಂಡಾಲ್ ಹಾಕಲಾಗಿದೆ. 40-60 ಅಡಿ ವೇದಿಕೆ ಮೇಲೆ 40 ಗಣ್ಯರಿಗೆ ಸ್ಥಾನ ಕಲ್ಪಿಸಲಾಗಿದೆ. ಕಾರ್ಯಕ್ರಮ ವೀಕ್ಷಿಸಲು 10,000 ಆಸನಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
2a ಮೀಸಲಾತಿ ಹಾಕ್ಕೋತಾಯಕ್ಕಾಗಿ ಬೃಹತ್ ಜನ ಜಾಗೃತಿ ಸಮಾವೇಶ ನಾಳೆ ನಡೆಯಲಿದೆ. ಲಿಂಗೈಕ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳಿಗೆ ನುಡಿ ನಮನ ಕಾರ್ಯಕ್ರಮ ನೆರವೇರಲಿದ್ದು ಮಧ್ಯಾಹ್ನ ನಡೆಯುವ ರೈತರತ್ನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭಾಗವಹಿಸಲಿದ್ದಾರೆ.

Post a Comment

0 Comments