ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ?


ಮಂದಾರ ನ್ಯೂಸ್ : ಅಕ್ಟೋಬರ್ 17 ರ ಮಂಗಳವಾರ ರಾತ್ರಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ವಿಷಯ ತಿಳಿಸಿದ ಅಮಿತ್ ಷಾ

ಕಳೆದ ವಾರ ದಿಲ್ಲಿಗೆ ಹೋಗಿದ್ದ ಯಡಿಯೂರಪ್ಪ ಅವರಿಗೆ ಬಿ.ವೈ.ರಾಘವೇಂದ್ರ ಅಧ್ಯಕ್ಷರಾಗಲಿ ಎಂದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ

ಆದರೆ ರಾಘವೇಂದ್ರ ಬದಲು ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಂದರೆ ಅನುಕೂಲ ಎಂದಿದ್ದ ಯಡಿಯೂರಪ್ಪ

ಆದರೆ ಯಡಿಯೂರಪ್ಪ ಮಾತಿಗೆ ಅಸಹಾಯಕತೆ ವ್ಯಕ್ತಪಡಿಸಿದ್ದ ಜೆ.ಪಿ.ನಡ್ಡಾ

ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ತರಲು ಯಡಿಯೂರಪ್ಪ ವಿರೋಧಿ ಬಣದ  ಅಪಸ್ವರ 

ಈ ಅಪಸ್ವರಕ್ಕೆ ಮನ್ನಣೆ ನೀಡಬೇಕು,ಯಡಿಯೂರಪ್ಪ ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬ ಕಾರಣಕ್ಕಾಗಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಪಟ್ಟ ಕಟ್ಟುವ ಮಾತನಾಡಿದ್ದ ಜಗತ್ ಪ್ರಕಾಶ್ ನಡ್ಡಾ

ಆದರೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಬೇಡ ಅಂತ ಹೇಳಿ ಬಂದಿದ್ದ ಯಡಿಯೂರಪ್ಪ

ಈ ಹಿನ್ನೆಲೆಯಲ್ಲಿ ಪುನ: ಕಸರತ್ತು ನಡೆಸಿದ ಬಿಜೆಪಿ ವರಿಷ್ಟರು

ಯಡಿಯೂರಪ್ಪ ಮತ್ತು ಅವರ ವಿರೋಧಿ ಬಣಕ್ಕೆ ಒಮ್ಮತದ ಅಭ್ಯರ್ಥಿಯ ಬಗ್ಗೆ ಚರ್ಚೆ

ಈ ಚರ್ಚೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿ ಬಂದ ಒಮ್ಮತದ ಅಭ್ಯರ್ಥಿ ಶೋಭಾ ಕರಂದ್ಲಾಜೆ

ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ಮಾತನಾಡಿದ ಕೇಂದ್ರ ಸಚಿವ ಅಮಿತ್ ಷಾ

ಮಾತುಕತೆಯ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಓಕೆನಾ?ಅಂತ ಪ್ರಶ್ನಿಸಿದ ಅಮಿತ್ ಷಾ
ಮುಂದಿನ ಸೋಮವಾರ ಇಲ್ಲವೇ ಮಂಗಳವಾರದ ವೇಳೆಗೆ ಶೋಭಾ ಕರಂದ್ಲಾಜೆ ಹೆಸರು ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ

ಆದರೆ ಶಾಸಕಾಂಗ ನಾಯಕನ ಆಯ್ಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ

ಮಂಡಿ ನೋವು ಅಂತ ಆಸ್ಪತ್ರೆಗೆ ಹೋದ ಬಸವರಾಜ ಬೊಮ್ಮಾಯಿ ಹೃದಯದ ಶಸ್ತ್ರ ಚಿಕಿತ್ಸೆಗೆ ಒಳಗಾದ ಹಿನ್ನೆಲೆ

ಅವರು ಗುಣಮುಖರಾದ ಮೇಲೆ ಶಾಸಕಾಂಗ ನಾಯಕನ ಹೆಸರು ಪ್ರಕಟಿಸಿ ಎಂದಿರುವ ಯಡಿಯೂರಪ್ಪ

ಬಸವರಾಜ ಬೊಮ್ಮಾಯಿ ಅವರೇ ಶಾಸಕಾಂಗ ನಾಯಕರಾಗಬೇಕು ಎಂದು ಪಟ್ಟು ಹಿಡಿದಿರುವ ಯಡಿಯೂರಪ್ಪ

ಆದರೆ ಶಾಸಕಾಂಗ ನಾಯಕನ ಸ್ಥಾನಕ್ಕೆ ಬಸವನಗೌಡ ಪಾಟೀಲ್ ಯತ್ನಾಳ್ ಬರಲಿ ಅಂತ ಪಟ್ಟು‌ ಹಿಡಿದಿರುವ ಯಡಿಯೂರಪ್ಪ ವಿರೋಧಿ ಬಣ

Post a Comment

0 Comments