ರಾಣೇಬೆನ್ನೂರು: ಕಳೆದ ಒಂದುವರೆ ವರ್ಷದಿಂದ ಕುಮಾರ ಪಟ್ಟಣಂ ಪೊಲೀಸ್ ಠಾಣೆಯ ಜನಸ್ನೇಹಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಂತೋಷ್ ಬಾಗೋಜಿ ಇವರನ್ನು ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ಪೊಲೀಸ್ ಠಾಣೆಯ ಠಾಣಾಧಿಕಾರಿಯಾಗಿ ವರ್ಗಾವಣೆ ಮಾಡಿದ್ದು, ಇವರಿಂದ ತೆರವಾದ ಜಾಗಕ್ಕೆ ಮಲೆಬೆನ್ನೂರು ಪೊಲೀಸ್ ಠಾಣೆಯ ಪಿಎಸ್ಐ 2 ಆಗಿ ಕರ್ತವ್ಯ ನಿರ್ವಹಿಸಿದ್ದ ಪ್ರವೀಣ್ ವಾಲೇಕರ್ ಇವರನ್ನು ಕುಮಾರಪಟ್ಟಣಂ ಪೊಲೀಸ್ ಠಾಣೆಯ ನೂತನ ಅಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
0 Comments