ಬಿಜೆಪಿ ತೊರೆದು ಕಾಂಗ್ರೆಸ್ ಸೇರಿಕೊಂಡ ಬಿಜೆಪಿ ಮುಖಂಡ ಬಿ ಎಂ ವಾಗೀಶ್ ಸ್ವಾಮಿ.!!

ಮಂದಾರ ನ್ಯೂಸ್, ಹರಿಹರ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಶುರುವಾಗಿದೆ. ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಬಿಜೆಪಿ ಮುಖಂಡರಾದ ಬಿ ಎಂ ವಾಗೀಶ್ ಸ್ವಾಮಿ ಅವರು ಇಂದು ಬಿಜೆಪಿ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಕೊಂಡಿದ್ದಾರೆ.

ಅಪಾರ ಬೆಂಬಲಿಗರೊಂದಿಗೆ ಇಂದು ಕರ್ನಾಟಕ ರಾಜ್ಯ ಸರ್ಕಾರದ ಭೂ ಮತ್ತು ಗಣಿ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಎಸ್ ರಾಮಪ್ಪನವರು ಕಾಂಗ್ರೆಸ್ ಮುಖಂಡರಾದ ನಂದಿಗಾವಿ ಶ್ರೀನಿವಾಸ್ ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Post a Comment

0 Comments